Crime News
ಅಕ್ರಮ ಮದ್ಯ ಮಾರಾಟ
ದಿನಾಂಕ 29-04-2018 ರಂದು ಶನಿವಾರಸಂತೆ ಠಾಣೆಯ ಉಪ ನಿರೀಕ್ಷಕರಾದ ಆನಂದ್ ರವರಿಗೆ ಸಿಕ್ಕಿದ ಮಾಹಿತಿ ಮೇರೆಗೆ ಸಿಬ್ಬಂದಿಯವರೊಂದಿಗೆ ಶನಿವಾರಸಂತೆ ನಗರದ ಬೈಪಾಸ್ ರಸ್ತೆಯ ಸರ್ಕಾರಿ ಆಸ್ಪತ್ರೆಯ ಹಿಂಭಾಗ ದೀಪಕ್ ಎಂಬುವವರು ಅಕ್ರಮವಾಗಿ ಮದ್ಯ ಮಾರಾಟ ಮಾಡುತ್ತಿದ್ದ ಸ್ಥಳಕ್ಕೆ ದಾಳಿಮಾಡಿ ವಶಕ್ಕೆ ಪಡೆದುಕೊಂಡು ಪ್ರರಕಣ ದಾಖಲಿಸಿಕೊಂಡಿರುತ್ತಾರೆ.
ಹಲ್ಲೆ ಪ್ರಕರಣ
ಹಳೇ ದ್ವೇಷದಿಂದ ವ್ಯಕ್ತಿಯ ಮೇಲೆ ಹಲ್ಲೆ ನಡೆಸಿದ ಘಟನೆ ಮಡಿಕೇರಿ ನಗರದಲ್ಲಿ ವರದಿಯಾಗಿದೆ. ಮಡಿಕೇರಿ ನಗರದ ನಿವಾಸಿ ಲೋಕೇಶ್ ಎಂಬುವವರು ದಿನಾಂಕ 29-04-2018 ರಂದು ತನ್ನ ಜೀಪಿನಲ್ಲಿ ಮಡಿಕೇರಿ ನಗರದ ಗೌಳಿಬೀದಿಯಲ್ಲಿ ಹೋಗುತ್ತಿರುವಾಗ ಪ್ರಮೋದ್ ಮತ್ತು ಆತನ ತಂದೆ ಹಳೇ ದ್ವೇಷದಿಂದ ಜಗಳ ತೆಗೆದು ಹಲ್ಲೆ ನಡೆಸಿದ್ದು ಈ ಬಗ್ಗೆ ಲೋಕೇಶ್ ರವರು ನೀಡಿದ ದೂರಿನ ಮೇರೆಗೆ ಮಡಿಕೇರಿ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ