News
ಸಿವಿಲ್ ಪೊಲೀಸ್ ನೇಮಕಾತಿ ಲಿಖಿತ ಪರೀಕ್ಷೆ:
CRIME NEWS
ಹಲ್ಲೆ ಪ್ರಕರಣ
ದಿನಾಂಕ: 18-09-2020 ರಂದು ರಾತ್ರಿ ಸೋಮವಾರಪೇಟೆ ತಾಲ್ಲೂಕು ಅಬ್ಬೂರುಕಟ್ಟೆ ನಿವಾಸಿ ವಿಜಯ್ ವೇಗಸ್ ಎಂಬುವವರಿಗೆ ಅದೇ ಗ್ರಾಮದ ನಿವಾಸಿ ಮಹೇಶ್ @ ಗೋವರ್ಧನ್ ಎಂಬುವವರು ವೈಯಕ್ತಿಕ ವಿಚಾರದಲ್ಲಿ ವೈಷಮ್ಯದಿಂದ ದಾರಿ ತಡೆದು ಕೊಲೆಮಾಡುವ ಉದ್ದೇಶದಿಂದ ರಾಡಿನಿಂದ ಹಲ್ಲೆ ಮಾಡಿ ಗಾಯಗೊಳಿಸಿದ್ದು ಈ ಬಗ್ಗೆ ನೀಡಿದ ಪುಕಾರಿನ ಮೇರೆ ಸೋಮವಾರಪೇಟೆ ಠಾಣೆ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.
ಹಲ್ಲೆ ಪ್ರಕರಣ
ದಿನಾಂಕ: 19-09-2020 ರಂದು ಸೋಮವಾರಪೇಟೆ ತಾಲ್ಲೂಕು ಮೆಣಸ ಗ್ರಾಮದ ನಿವಾಸಿ ಚೇತನ್ ಎಂಬುವವರಿಗೆ ಸಂದೀಪ, ಮಹೇಶ್ ಮತ್ತು ಕಾರ್ತಿಕ್ ಎಂಬುವವರು ಕ್ಷುಲ್ಲಕ ಕಾರಣಕ್ಕೆ ದಾರಿ ತಡೆದು ಹಲ್ಲೆ ಮಾಡಿ ಕೊಲೆ ಬೆದರಿಕೆ ಹಾಕಿದ್ದು ಈ ಬಗ್ಗೆ ನೀಡಿದ ಪುಕಾರಿನ ಮೇರೆ ಶನಿವಾರಸಂತೆ ಠಾಣ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.
ಕಾರಿಗೆ ಬೈಕ್ ಡಿಕ್ಕಿ, ಸವಾರ ಸಾವು.
ದಿನಾಂಕ: 19-09-2020 ರಂದು ಸೋಮವಾರಪೇಟೆ ತಾಲ್ಲೂಕು ಯಡವನಾಡು ಗ್ರಾಮದ ಬಳಿ ಮುಖ್ಯ ರಸ್ತೆಯಲ್ಲಿ ಕೆ-09-ಹೆಚ್ಎಂ-6327 ರ ಬೈಕನ್ನು ಅದರ ಸವಾರ ಯಶಸ್ ಎಂಬುವವರು ಅತಿವೇಗ ಮತ್ತು ಅಜಾಗರೂಕತೆಯಿಂದ ಚಾಲನೆ ಮಾಡಿಕೊಂಡು ಹೋಗಿ ಎದುರುಗಡೆಯಿಂದ ಬರುತ್ತಿದ್ದ ಕಾರಿಗೆ ಡಿಕ್ಕಿಪಡಿಸಿದ ಪರಿಣಾಮ ಬೈಕ್ ನಲ್ಲಿದ್ದ ಇಬ್ಬರೂ ಸವಾರರು ಗಾಯಗೊಂಡವರನ್ನು ಕೂಡಲೇ ಚಿಕಿತ್ಸೆಗೆ ಆಸ್ಪತ್ರೆಗೆ ದಾಖಲಿಸಿದ್ದು. ತಲೆಗೆ ಗಂಭೀರ ಗಾಯವಾಗಿದ್ದು ಹಿಂಬದಿ ಸವಾರ ಮನೋಜ್ ಎಂಬುವವರು ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದು ಈ ಬಗ್ಗೆ ನೀಡಿದ ಪುಕಾರಿನ ಮೇರೆ ಸೋಮವಾರಪೇಟೆ ಠಾಣೆ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.
ಮನೆ ಕಳವು ಯತ್ನ ಪ್ರಕರಣ
ದಿನಾಂಕ: 19-09-2020 ರಂದು ಬೆಳಿಗ್ಗೆ ವಿರಾಜಪೇಟೆ ತಾಲ್ಲೂಕು ಗೋಣಿಕೊಪ್ಪ ಸಮುದಾಯ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿಯವರ ವಸತಿ ಗೃಹದ ಬಾಗಿಲಿಗೆ ಹಾಕಿದ್ದ ಬೀಗವನ್ನು ಯಾರೋ ಕಳ್ಳರು ಒಡೆದು ಒಳನುಗ್ಗಿ ಮನೆಯೊಳಗಿದ್ದ ಬೀರುವಿನ ಬಾಗಿಲನ್ನು ತೆರೆದು ಕಳ್ಳತನ ಮಾಡಲು ಪ್ರಯತ್ನಿಸಿದ್ದು ಈ ಬಗ್ಗೆ ನೀಡಿದ ಪುಕಾರಿನ ಮೇರೆ ಗೋಣಿಕೊಪ್ಪ ಠಾಣೆ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.
ಅಕ್ರಮ ಜೂಜಾಟ ಪ್ರಕರಣ
ದಿನಾಂಕ: 19-09-2020 ರಂದು ಮಡಿಕೇರಿ ತಾಲ್ಲೂಕು ಮರಗೋಡು ಗ್ರಾಮದ ಸೇತುವೆಯ ಬಳಿ ಸಾರ್ವಜನಿಕ ಸ್ಥಳದಲ್ಲಿ ಕೆಲವು ಯುವಕರು ಅಕ್ರಮವಾಗಿ ಜೂಜಾಟವಾಡುತ್ತಿದ್ದ ಪ್ರಕರಣವನ್ನು ಮಡಿಕೇರಿ ಗ್ರಾಮಾಂತರ ಠಾಣೆ ಪೊಲೀಸರು ಪತ್ತೆ ಮಾಡಿ ಪ್ರಕರಣ ದಾಖಲಿಸಿ ಕಾನೂನು ಕ್ರಮ ಕೈಗೊಂಡಿದ್ದಾರೆ.